ಬೆಂಗಳೂರು:ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರುಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಜೀವ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಸದಸ್ಯತ್ವ ಪ್ರತಿಯನ್ನು ಪಾಟೀಲ ಅವರಿಗೆ ಹಸ್ತಾಂತರಿಸಿ,‘ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿ ಸುವ ಉದ್ದೇಶದಿಂದ ‘ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಅಭಿಯಾನ ಪ್ರಾರಂಭಿಸಲಾಗಿದೆ. ಇದರ ಭಾಗವಾಗಿ ರಾಜ್ಯದಾದ್ಯಂತ ಜನಸಾಮಾನ್ಯರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನ ಮಾಡಿದ ಮಹನೀಯರುಗಳ ಮನೆ ಹಾಗೂ ಕಚೇರಿಗೆ ಭೇಟಿ ನೀಡಲಾಗುತ್ತಿದೆ’ ಎಂದರು.
‘ಲೋಕಾಯುಕ್ತದಲ್ಲಿರುವ ಎಲ್ಲ ಸಿಬ್ಬಂದಿ ಪರಿಷತ್ತಿನ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದು ಆಶಯ ವ್ಯಕ್ತಪಡಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದಬಿ.ಎಸ್. ಪಾಟೀಲ, ‘ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿದೆ. ಇದು ಜನಸಾಮಾನ್ಯರ ಪರಿಷತ್ತಾಗುವ ವಿಶ್ವಾಸವಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.