ಬೆಂಗಳೂರು: ಲೋಕಾಯುಕ್ತ ಎನ್ ವೆಂಕಟಾಚಲ ಅವರ ನಿಧನಕ್ಕೆ ರಾಜ್ಯದ ಗಣ್ಯರು, ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಇವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಬುಧವಾರಹೃದಯಾಘಾತದಿಂದ ಕೊನೆಯುಸಿರೆಳೆದರು.
ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ ಗಣ್ಯರು, ಈ ವೇಳೆ ವೆಂಕಟಾಚಲ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರುಲೋಕಾಯುಕ್ತದ ಶಕ್ತಿಯನ್ನು ದಕ್ಷತೆಯಿಂದ ಉಪಯೋಗಿಸಿ ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ವೆಂಕಟಾಚಲರವರ ಕೊಡುಗೆ ಅಪಾರ ಎಂದು ಟ್ವೀಟ್ ಮಾಡಿದ್ದಾರೆ.
ವೆಂಕಟಾಚಲ ಅವರು ಭ್ರಷ್ಟ ರಾಜಕಾರಣಿಗಳು, ಅಧಿಕಾರಿಗಳಲ್ಲಿ ಭಯ ಹುಟ್ಟಿಸಿದವರು. ಜೊತೆಗೆ ಹಲವು ಪ್ರಾಮಾಣಿಕ ಅಧಿಕಾರಿಗಳಿಗೆ ಮಾದರಿಯಾದ ಲೋಕಾಯುಕ್ತ. ಇವರ ಅಗಲಿಕೆ ನೋವು ತಂದಿದೆ ಎಂದು ಶೋಭಾ ಕರಂದ್ಲಾಜೆಟ್ವೀಟ್ ಮಾಡಿದ್ದಾರೆ.
ಭ್ರಷ್ಟಾಚಾರ ರಹಿತ ಸಮಾಜಕ್ಕಾಗಿ ಪಣತೊಟ್ಟವರು: ಯಡಿಯೂರಪ್ಪ
ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದವರು: ಬಿಜೆಪಿ ಕರ್ನಾಟಕ
ಭ್ರಷ್ಟರ ವಿರುದ್ಧ ಸಮರ ಸಾರಿದವರು: ಸಿದ್ದರಾಮಯ್ಯ
ಲೋಕಾಯುಕ್ತ ಸಂಸ್ಥೆಗೆ ಅವರ ಕೊಡುಗೆ ಅಪಾರ: ರಾಜೀವ್ ಚಂದ್ರಶೇಖರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.