ADVERTISEMENT

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 3:11 IST
Last Updated 14 ಅಕ್ಟೋಬರ್ 2025, 3:11 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಮಂಗಳವಾರ ಮುಂಜಾನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ.

ADVERTISEMENT

ಯಾರ ಮೇಲೆ ದಾಳಿ

ಜ್ಯೋತಿ ಮೇರಿ – ಪ್ರಥಮ ದರ್ಜೆ ಸಹಾಯಕಕಿ (ಎಫ್‌ಡಿಎ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಹಾಸನ)

ಧೂಳಪ್ಪ– ಸಹಾಯಕ ನಿರ್ದೇಶಕ, ಕೃಷಿ ಇಲಾಖೆ (ಕಲಬುರಗಿ)

ಚಂದ್ರಕುಮಾರ್– ಸಹಾಯಕ ನಿರ್ದೇಶಕ, ಕೃಷಿ ಇಲಾಖೆ (ಚಿತ್ರದುರ್ಗ)

ಲಕ್ಷ್ಮೀನಾರಾಯಣ ಪಿ. ನಾಯಕ್ – ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ), ಸಾರಿಗೆ ಇಲಾಖೆ (ಉಡುಪಿ)

ಮಂಜುನಾಥ ಜಿ. – ವೈದ್ಯಾಧಿಕಾರಿ, ಮಲ್ಲಸಂದ್ರ ಹೆರಿಗೆ ಆಸ್ಪತ್ರೆ (ಬೆಂಗಳೂರು ನಗರ)

ಜಗದೀಶ ನಾಯ್ಕ್– ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ), ಕೆಆರ್‌ಐಡಿಎಲ್ (ದಾವಣಗೆರೆ)

ಅಶೋಕ – ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ (ವಿಎಒ), ರಾಣೇಬೆನ್ನೂರು (ಹಾವೇರಿ)

ಬಸವೇಶ್ – ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಸವಣೂರು (ಹಾವೇರಿ)

ಚೇತನ್– ಕಿರಿಯ ಇಂಜಿನಿಯರ್, ಆಲಮಟ್ಟಿ ಬಲದಂಡೆ ಕಾಲುವೆ ಕಚೇರಿ, (ಬಾಗಲಕೋಟೆ)

ವಿ. ಸುಮಂಗಳಾ– ನಿರ್ದೇಶಕಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಬೆಂಗಳೂರು ನಗರ)

ಬಿ.ಎಸ್. ನಡುವಿನಮನಿ – ಕಿರಿಯ ಇಂಜಿನಿಯರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ದಾವಣಗೆರೆ)

ಎನ್. ಕೆ. ಗಂಗಾಮರಿ ಗೌಡ– ಮೋಜಣಿದಾರ, ವಿಶೇಷ ಭೂಸ್ವಾಧೀನ ಕಚೇರಿ-2, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬೆಂಗಳೂರು)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.