
ಪ್ರಜಾವಾಣಿ ವಾರ್ತೆ₹1.70 ಕೋಟಿ ನಗದು
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಂಟೆಂಡೆಂಟ್ ಎಂಜಿನಿಯರ್ ಎಚ್.ಎಂ.ಜನಾರ್ಧನ್ ಅವರ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ₹1.70 ಕೋಟಿ ನಗದು ಪತ್ತೆಯಾಗಿದೆ.
ಜನಾರ್ಧನ್ ಮತ್ತು ಅವರ ಆಪ್ತರ ಮನೆಗಳ ಮೇಲೆ ಬೆಳಿಗ್ಗೆಯೇ ದಾಳಿ ನಡೆಸಲಾಗಿದ್ದು, ಶೋಧ ಮುಂದುವರೆದಿದೆ. ನಗದು ಎಣಿಕೆ ಮಾಡಲು ಯಂತ್ರಗಳನ್ನು ಬಳಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಶೋಧ ಮುಂದುವರೆದಿದ್ದು, ಆಪಾದಿತ ಅಧಿಕಾರಿಯ ಒಟ್ಟು ಆಸ್ತಿಯ ವಿವರ ನೀಡಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.