ADVERTISEMENT

ವಕ್ಫ್ ಆಸ್ತಿ ದುರ್ಬಳಕೆ ಲೋಕಾಯುಕ್ತ ವರದಿ

ವಿಧಾನಮಂಡಲದಲ್ಲಿ ವರದಿ ಮಂಡಿಸುವಂತೆ ಮುಖ್ಯಮಂತ್ರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 21:17 IST
Last Updated 16 ಜೂನ್ 2020, 21:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಕ್ಫ್‌ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಅನ್ವರ್‌ ಮಾಣಿಪ್ಪಾಡಿ ವರದಿಯನ್ನು ಆಧರಿಸಿ ಲೋಕಾಯುಕ್ತ ಸಂಸ್ಥೆಯು ತನಿಖೆ ಕೈಗೊಂಡು ಸಲ್ಲಿಸಿರುವ ಮಧ್ಯಂತರ ವರದಿಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದರು.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್‌ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ನಿರ್ದೇಶನ ನೀಡಿದರು.

ವಕ್ಫ್‌ ಆಸ್ತಿಗಳ ದುರ್ಬಳಕೆ ಮತ್ತು ಒತ್ತುವರಿ ಕುರಿತು ಹಿಂದೆ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅನ್ವರ್‌ ಮಾಣಿಪ್ಪಾಡಿ ವರದಿ ನೀಡಿದ್ದರು. ಇದರ ತನಿಖೆ ಉಸ್ತುವಾರಿಯನ್ನು ಲೋಕಾಯುಕ್ತರಿಗೆ ಒಪ್ಪಿಸಿದ್ದು, ಲೋಕಾಯುಕ್ತ ಮಧ್ಯಂತರ ವರದಿ ನೀಡಿತ್ತು. ಸಚಿವ ಸಂಪುಟವು ಇದಕ್ಕೆ ಅನುಮೋದನೆ ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.