ತುಮಕೂರು: ಮುಂದಿನವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಟಿಕೆಟ್ ಅಂತಿಮಗೊಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಜಯಸಂಕಲ್ಪ ಯಾತ್ರೆ ಬೈಕ್ ರ್ಯಾಲಿಗೆ ಚಾಲನೆ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರುಮಾತನಾಡಿದರು.
‘ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಪಕ್ಷ ಗೆಲ್ಲುವ ವಿಶ್ವಾಸವಿದೆ. ದೇಶದಲ್ಲಿ 300 ಸ್ಥಾನಗಳನ್ನು ಗೆದ್ದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ವಿಶ್ವಾಸವಿದೆ’ ಎಂದರು.
‘ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇನ್ನೂ ಅಭ್ಯರ್ಥಿ ಬಗ್ಗೆ ತೀರ್ಮಾನಿಸಿಲ್ಲ. ಚರ್ಚೆ ಮಾಡುತ್ತಿದ್ದೇವೆ’ ಎಂದು ಹೇಳಿದರು.
ಇವನ್ನೂ ಓದಿ...
* ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ: ಯಡಿಯೂರಪ್ಪ
*ನಿರ್ದಿಷ್ಟ ದಾಳಿ ಚುನಾವಣಾ ದಾಳವಲ್ಲ: ಶಾಸಕ ಸುರೇಶ ಕುಮಾರ್
*ಯಡಿಯೂರಪ್ಪ ಹೇಳಿಕೆಯನ್ನು ರಿಟ್ವೀಟ್ ಮಾಡಿ ವ್ಯಂಗ್ಯವಾಡಿದ ಪಾಕ್ ಪ್ರಧಾನಿಯ ಪಕ್ಷ
*ಬಿಜೆಪಿ ನಾಯಕರಿಗೆ ಆತಂಕ ತಂದ ಸಮೀಕ್ಷೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.