ADVERTISEMENT

26ಕ್ಕೆ ಲಾರಿ ಮುಷ್ಕರ; ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 22:07 IST
Last Updated 16 ಫೆಬ್ರುವರಿ 2021, 22:07 IST

ಬೆಂಗಳೂರು: ಕೇಂದ್ರ ಸರ್ಕಾರದ ಜಿಎಸ್‌ಟಿ ವೇ–ಬಿಲ್ ಕ್ರಮ ಖಂಡಿಸಿ ರಾಷ್ಟ್ರೀಯ ಟ್ರೇಡರ್ಸ್ ಯೂನಿಯನ್ ವತಿಯಿಂದ ಫೆ. 26ರಂದು ಕರೆ ನೀಡಿರುವ ಬಂದ್‌ಗೆ ರಾಜ್ಯದ ಲಾರಿ ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಅಂದು ರಾಜ್ಯದಾದ್ಯಂತ ಲಾರಿಗಳ ಸಂಚಾರವನ್ನು ಸ್ಥಗಿತಗೊಳಿಸಿ, ಮಾಲೀಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

‘ಹೋರಾಟಕ್ಕೆ ನಾವೂ ಬೆಂಬಲ ನೀಡುತ್ತಿದ್ದು, ಅಂದು ಲಾರಿಗಳ ಓಡಾಟ ಇರುವುದಿಲ್ಲ’ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.