ADVERTISEMENT

ಪ್ರೇಮಿಗಳ ದಿನದಂದೇ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 21:50 IST
Last Updated 14 ಫೆಬ್ರುವರಿ 2021, 21:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸವದತ್ತಿ: ತಾಲ್ಲೂಕಿನ ಹಂಚಿನಾಳ ಗ್ರಾಮದ ದನದ ಶೆಡ್‌ವೊಂದರಲ್ಲಿ ಪ್ರೇಮಿಗಳ ದಿನದಂದೇ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿದ್ದಾರೆ.

ಹಂಚಿನಾಳ ಗ್ರಾಮದ ಆಶೀಫ್‌ ಹುಸೇನಸಾಬ ಜವಳಿ (21) ಹಾಗೂ ಮುಶಾಬಿ ಅಟೇಲಸಾಬ ಧಾರವಾಡ (20) ಮೃತರು.

ಇಬ್ಬರ ಪ್ರೀತಿಗೆ ಮನೆಯವರ ವಿರೋಧವಿತ್ತು. ಇದರಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಸವದತ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.