ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 0:13 IST
Last Updated 6 ಏಪ್ರಿಲ್ 2024, 0:13 IST
   

ಎಚ್‌.ಡಿ. ಕುಮಾರಸ್ವಾಮಿ ಅವರು ಸಹಕಾರ ಕೊಡಿ ಎಂದು ಹೇಳಿದ್ದಾರೆ. ಪ್ರಚಾರಕ್ಕೆ ಬನ್ನಿ ಎಂದು ಕರೆದಿಲ್ಲ. ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ಕುರಿತು ಪಕ್ಷದ ಸೂಚನೆಯಂತೆ ನಡೆದುಕೊಳ್ಳುತ್ತೇನೆ. ಇದು ಮಂಡ್ಯದ ಚುನಾವಣೆಯಲ್ಲ, ದೇಶಕ್ಕಾಗಿ ನಡೆಯುತ್ತಿರುವ ಚುನಾವಣೆ. 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದು ನಮ್ಮ ಗುರಿ

- ಸುಮಲತಾ ಅಂಬರೀಷ್‌, ಮಂಡ್ಯ ಸಂಸದೆ

ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಹಲವರು ತಿರಸ್ಕಾರದಿಂದ ನೋಡುತ್ತಿದ್ದರು. ಈಗ 1.14 ಕೋಟಿ ಮಹಿಳೆಯರು ನೇರವಾಗಿ ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ 10 ಸ್ಥಾನ ಕೂಡ ಬರುವುದಿಲ್ಲ ಎಂಬ ವರದಿಯನ್ನು ಕೇಂದ್ರ ಗುಪ್ತಚರ ಇಲಾಖೆಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ  ಕೊಟ್ಟಿದ್ದಾರಂತೆ. ನನಗಿರುವ ಮಾಹಿತಿ ಪ್ರಕಾರ, ಗ್ಯಾರಂಟಿ ಯೋಜನೆಗಳಿಂದಾಗಿ ಬಿಜೆಪಿಯ ಶೇಕಡ 10ರಿಂದ 15ರಷ್ಟು ಮತಗಳು ಕಾಂಗ್ರೆಸ್‌ ಪಕ್ಷಕ್ಕೆ ವರ್ಗಾವಣೆ ಆಗಲಿವೆ

ADVERTISEMENT

- ವಿನಯಕುಮಾರ್‌ ಸೊರಕೆ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.