ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಘಟಕದ ಹಿಂದುಳಿದ ವರ್ಗಗಳ ವಿಭಾಗದ (ಒಬಿಸಿ) ಕಾರ್ಯಾಧ್ಯಕ್ಷ ಸ್ಥಾನಕ್ಕೆಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಎಐಸಿಸಿಯು ನೇಮಕ ಮಾಡಿದೆ.
ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ನೇಮಕದ ಆದೇಶ ಹೊರಡಿಸಿದ್ದಾರೆ.
ಸೊರಬ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕರಾಗಿದ್ದ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಳೆದ 2021 ಜುಲೈನಲ್ಲಿ ಕಾಂಗ್ರೆಸ್ ಸೇರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.