ADVERTISEMENT

ಗಡಿ ವಿವಾದ ಕೆದಕುವುದು ಸಲ್ಲ: ಸಿ.ಎನ್. ಅಶ್ವತ್ಥನಾರಾಯಣ

ಮಧ್ವಾಚಾರ್ಯ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 22:00 IST
Last Updated 19 ಜನವರಿ 2020, 22:00 IST
ಮಧ್ವಾಚಾರ್ಯರ ಪ್ರತಿಮೆಯನ್ನು ಡಾ. ಸಿ.ಎನ್. ಅಶ್ವತ್ಥನಾರಾಯಣ ಲೋಕಾರ್ಪಣೆ ಮಾಡಿದರು. ಮಂತ್ರಾಲಯ ರಾಘವೇಂದ್ರ ಮಠದ ಸುಬುಧೇಂದ್ರತೀರ್ಥರು ಇದ್ದರು 
ಮಧ್ವಾಚಾರ್ಯರ ಪ್ರತಿಮೆಯನ್ನು ಡಾ. ಸಿ.ಎನ್. ಅಶ್ವತ್ಥನಾರಾಯಣ ಲೋಕಾರ್ಪಣೆ ಮಾಡಿದರು. ಮಂತ್ರಾಲಯ ರಾಘವೇಂದ್ರ ಮಠದ ಸುಬುಧೇಂದ್ರತೀರ್ಥರು ಇದ್ದರು    

ಬೆಂಗಳೂರು: ‘ಮಹಾರಾಷ್ಟ್ರ- ಕರ್ನಾಟಕ ಗಡಿ ವಿಚಾರ ಮಹಾಜನ್‌ ವರದಿಯಲ್ಲೇ ಇತ್ಯರ್ಥ ಆಗಿದೆ. ಈ ವಿಚಾರವಾಗಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವುದು ಸರಿಯಲ್ಲ. ಶಿವಸೇನಾ ವಕ್ತಾರ ಸಂಜಯ್‌ ರಾವುತ್‌ ಮತ್ತೆ ಮತ್ತೆ ಗಡಿ ಕುರಿತು ತಗಾದೆ ತೆಗೆಯುವುದು ಬಿಟ್ಟು ಅಭಿವೃದ್ಧಿಯತ್ತ ಗಮನ ಕೊಡಲಿ’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಮಲ್ಲೇಶ್ವರದಲ್ಲಿ ಭಾನುವಾರ ಮಧ್ವಾಚಾರ್ಯರ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮಾನವೀಯತೆಗೆ, ಒಳ್ಳೆಯ ಕಾರ್ಯಗಳಿಗೆ ಗಡಿ ಇಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರದ ಜನ ಸೌಹಾರ್ದದಿಂದ ಬಾಳುತ್ತಿದ್ದೇವೆ. ಅನಗತ್ಯ ವಿವಾದ ಎಳೆದು ತಂದು ಸಮಾಜದ ಶಾಂತಿ ಹಾಳು ಮಾಡಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT