ADVERTISEMENT

ಮಹದಾಯಿ ಹೋರಾಟಗಾರ ಕಿಲಾರಿಮಠ ನಿಧನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 5:57 IST
Last Updated 21 ನವೆಂಬರ್ 2018, 5:57 IST
   

ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರ ಚಂದ್ರಶೇಖರಯ್ಯ ಶಿವಯ್ಯ ಕಿಲಾರಿಮಠ(52) ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ರೈತ ಹೋರಾಟಗಾರರಾಗಿದ್ದ ಕಿಲಾರಿಮಠ ಅವರು ಕಳಸಾ ಬಂಡೂರಿ, ಮಹದಾಯಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.

ADVERTISEMENT

ನರಗುಂದ-ನವಲಗುಂದ-ಹುಬ್ಬಳ್ಳಿ-ಧಾರವಾಡ, ಮುನವಳ್ಳಿ,ಬಾದಾಮಿ ಸೇರಿದಂತೆ ವಿವಿಧೆಡೆ ನಡೆದ ಕಳಸಾ ಬಂಡೂರಿ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.

ಹುಬ್ಬಳ್ಳಿ ‌ವಿಜಯನಗರ‌ ನಿವಾಸಿಯಾಗಿದ್ದರು. ಅವರಿಗೆ ಮಾತು ಬರುತ್ತಿರಲಿಲ್ಲ. ಆದರೂ ಹೋರಾಟದಲ್ಲಿ ಸಕ್ರಿಯವಾಗಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.