ADVERTISEMENT

ಮಹದಾಯಿ ಅಧಿಸೂಚನೆ ಕೇಂದ್ರಕ್ಕೆ ನಿಯೋಗ

ಜುಲೈ 15ಕ್ಕೆ ಸುಪ್ರೀಂನಲ್ಲಿ ಅಂತಿಮ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 19:45 IST
Last Updated 24 ಫೆಬ್ರುವರಿ 2020, 19:45 IST
ಮಹಾದಾಯಿ
ಮಹಾದಾಯಿ   

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೂಡಲೇ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಸಲುವಾಗಿನಿಯೋಗ ತೆರಳಲು ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹದಾಯಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದ ನಿಯೋಗ ಮಂಗಳವಾರ ದೆಹಲಿಗೆ ತೆರಳಿ ಮನವಿ ಸಲ್ಲಿಸಲಿದೆ.

ಮಹದಾಯಿ ನದಿ ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸುವಂತೆ ಕೋರ್ಟ್ ನಿರ್ದೇಶನನೀಡಿದೆ. ಕೇಂದ್ರದ ಮೇಲೆ ಒತ್ತಡ ತಂದು ತಕ್ಷಣವೇ ಅಧಿಸೂಚನೆ ಹೊರಡಿಸುವಂತೆ ಮಾಡಬೇಕು. ಈ ಕೆಲಸ ಪೂರ್ಣಗೊಂಡರೆ ಮುಂದಿನ ಹಾದಿ ಸುಗಮವಾಗಲಿದೆ.

ADVERTISEMENT

ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ಜುಲೈ 15ರಿಂದಆರಂಭವಾಗಲಿದ್ದು, ಅಷ್ಟರೊಳಗೆ ಅಧಿಸೂಚನೆ ಹೊರಡಿಸುವಂತೆ ಕೋರಲಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆಗೆ ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಚರ್ಚಿಸಲಿದ್ದಾರೆ. ಈ ಇಬ್ಬರೂ ಸಚಿವರು ಮುಂದಿನ ವಾರ ದೆಹಲಿಗೆ ತೆರಳಿ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಒತ್ತಡ ಹಾಕಲಿದ್ದಾರೆಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.