ADVERTISEMENT

ಆಲಮಟ್ಟಿ ಎತ್ತರಿಸದಂತೆ ಮಹಾರಾಷ್ಟ್ರ ಶಾಸಕ ಮನವಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 10:56 IST
Last Updated 10 ಅಕ್ಟೋಬರ್ 2022, 10:56 IST
   

ಕನ್ನೇರಿ (ಕೊಲ್ಹಾಪುರ ಜಿಲ್ಲೆ): ‘ಆಲಮಟ್ಟಿ ಜಲಾಶಯದಿಂದ ಕೊಲ್ಹಾಪುರ ಹಾಗೂ ಸಾತಾರಾ ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಾಗುತ್ತಿದೆ. ಆದ್ದರಿಂದ ಆ ಜಲಾಶಯ ಎತ್ತರ ಹೆಚ್ಚಿಸಬೇಡಿ‘ ಎಂದು ಕೊಲ್ಹಾಪುರ ಶಾಸಕ ರಾಜು ಶೆಟ್ಟಿ ನೇತೃತ್ವದಲ್ಲಿ ಮಹಾರಾಷ್ಟ್ರದ ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಂತ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿಮಾನಕ್ಕೆ ಬಂದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ನೀಡಿದರು. ಈಗಾಗಲೇ ಮಹಾರಾಷ್ಟ್ರದ ಹೊಲ ಗದ್ದೆಗಳಲ್ಲಿ ನೀರು ನಿಂತು ಬೆಳೆ ನಾಶವಾಗುತ್ತಿದೆ. ಮತ್ತೆ ಜಲಾಶಯ ಎತ್ತರಿಸಿದರೆ ದೊಡ್ಡ ಪ್ರಮಾಣದ ಹಾನಿ ಆಗಲಿದೆ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT