ADVERTISEMENT

ರಾಜ್ಯದ ಶಾಸಕರು ತಂಗಿರುವ ಹೋಟೆಲ್‌ ಎದುರು ಪ್ರತಿಭಟನೆ 

ಏಜೆನ್ಸೀಸ್
Published 7 ಜುಲೈ 2019, 12:30 IST
Last Updated 7 ಜುಲೈ 2019, 12:30 IST
   

ಮುಂಬೈ: ರಾಜೀನಾಮೆ ನೀಡಿರುವ ಕರ್ನಾಟಕದ ಶಾಸಕರು ಉಳಿದುಕೊಂಡಿರುವ ಮುಂಬೈನ ಸೋಫಿಟೆಲ್‌ ಹೋಟೆಲ್‌ ಎದುರು ಮಹಾರಾಷ್ಟ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕರ್ನಾಟಕದ 13 ಮಂದಿ ಶಾಸಕರು ಶನಿವಾರ ಮುಂಬೈಗೆ ತೆರಳಿ ಅಲ್ಲಿನ ಸೋಫಿಟೆಲ್‌ ಹೋಟೆಲ್‌ನಲ್ಲಿ ಆಶ್ರಯ ಪಡೆದರು. ಈ ಸಂಗತಿ ದೇಶಾದ್ಯಂತ ಸುದ್ದಿಯಾಗುತ್ತಲೇ ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷಸುರಾಜ್‌ ಸಿಂಗ್‌ ಠಾಕೂರ್‌ ಅವರ ನೇತೃತ್ವದಲ್ಲಿ ಹೊಟೇಲ್‌ ಬಳಿ ಜಮಾಯಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕರು ತಮ್ಮರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ADVERTISEMENT

ಶಾಸಕರು ತಂಗಿರುವ ಹೊಟೇಲ್‌ಗೆ ಮಹಾರಾಷ್ಟ್ರ ಸರ್ಕಾರ ಭಾರಿ ಭದ್ರತೆ ಒದಗಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.