ಬೆಂಗಳೂರು: ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯ ವಿದೆ ಎಂದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧ ಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಕಾನೂನಾತ್ಮಕ ಹೋರಾಟ:
ಈ ರೀತಿಯ ಕ್ರಮ ಸರಿಯಾದುದಲ್ಲ. ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕ ವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.