ADVERTISEMENT

ಮಹಾರಾಷ್ಟ್ರ ಜನರ ಪ್ರವೇಶ ನಿರ್ಬಂಧ: ಸಿಎಂ ಜತೆ ಚರ್ಚಿಸಿ ನಿರ್ಧಾರ- ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 10:23 IST
Last Updated 21 ಮಾರ್ಚ್ 2020, 10:23 IST
   

ಬೆಳಗಾವಿ: 'ಅತಿ ಹೆಚ್ಚು ಕೊರೊನಾ ಸೋಂಕು ಬಾಧಿತ ಪ್ರಕರಣಗಳು ಕಂಡುಬಂದಿರುವುದರಿಂದ ಮಹಾರಾಷ್ಟ್ರದಿಂದ ಜನರು ರಾಜ್ಯ ಪ್ರವೇಶಿಸದಂತೆ ನಿರ್ಬಂಧ ವಿಧಿಸುವ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಆರೋಗ್ಯ ಇಲಾಖೆಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಇದಕ್ಕೂ ಮುಂಚೆ ನಗರದಲ್ಲಿ ನಡೆದ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, 'ಮುಂಜಾಗ್ರತಾ ಕ್ರಮವಾಗಿ ನೆರೆಯ ಮಹಾರಾಷ್ಟ್ರದ ಜನರ ಪ್ರವೇಶವನ್ನು ಒಂದು ವಾರದ ಮಟ್ಟಿಗೆ‌ ನಿರ್ಬಂಧಿಸಲು ಉಭಯ ಸರ್ಕಾರಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು' ಎಂದು ಮನವಿ ಮಾಡಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.