ADVERTISEMENT

ಅನ್ಯರಾಜ್ಯದಿಂದ ಬರುವವರ ನೋಂದಣಿ ಮಾಡಿಸಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 8:40 IST
Last Updated 8 ಜುಲೈ 2020, 8:40 IST

ಬೆಂಗಳೂರು: ಹೊರ ರಾಜ್ಯಗಳಿಂದ ಬರುವ ಜನರ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಕನ್ನಡ ಗೆಳೆಯರ ಬಳಗವು ಸರ್ಕಾರವನ್ನು ಒತ್ತಾಯಿಸಿದೆ.

‘ರಾಜ್ಯದ ಬೇರೆ ಭಾಗಗಳಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ಜನ ಇಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವಂತೆಯೇ ತಮ್ಮ ಊರುಗಳಿಗೆ ಗುಳೆ ಹೋಗುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರೇ ‘ಬೆಂಗಳೂರು ತೊರೆಯಬೇಡಿ’ ಎಂದು ಮನವಿ ಮಾಡಿದರೂ ಕೇಳುತ್ತಿಲ್ಲ. ಇನ್ನೊಂದೆಡೆ ತಮಿಳುನಾಡಿನಿಂದ ಜನ ಬೆಂಗಳೂರಿಗೆ ತಂಡೋಪತಂಡವಾಗಿ ವಲಸೆ ಬರುತ್ತಿದ್ದಾರೆ. ಕೆಲವು ದಿನಗಳ ಹಿಂದೆ ತಮಿಳುನಾಡಿನಿಂದ ಚಾಮರಾಜನಗರಕ್ಕೆ ಬರುತ್ತಿರುವ ತಮಿಳರನ್ನು ತಡೆಯಲು ಸ್ಥಳೀಯರು ಒತ್ತಾಯಿಸಿದ್ದರು.’

‘ಇಲ್ಲಿ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಸುದ್ಧಿ ತಿಳಿದು ನೆರೆರಾಜ್ಯದವರು ವಲಸೆ ಬರುವುದು ಸಹಜ. ಆದರೆ, ಅದಕ್ಕೆ ಸರ್ಕಾರ ನಿಯಂತ್ರಣ ಹೊಂದದಿರುವುದು ಸರಿಯಲ್ಲ. ವಲಸಿಗರ ಬಗ್ಗೆ ಜಾಗೃತರಾಗದಿದ್ದರೆ ‘ಕನ್ನಡ ಅನಾಥ; ಕನ್ನಡಿಗ ಸ್ಥಳೀಯ ನಿರಾಶ್ರಿತ’ ಅನ್ನುವ ಸ್ಥಿತಿ ಮರುಕಳಿಸುತ್ತದೆ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಅವರು ಸರ್ಕಾರವನ್ನು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.