ADVERTISEMENT

ಸುಮಲತಾ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು: ಮಾಳವಿಕಾ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 7:11 IST
Last Updated 9 ಏಪ್ರಿಲ್ 2019, 7:11 IST
ಬಿಜೆಪಿ ಸಹ ವಕ್ತಾರೆ ಮಾಳವಿಕಾ
ಬಿಜೆಪಿ ಸಹ ವಕ್ತಾರೆ ಮಾಳವಿಕಾ   

ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಭಾಷಣೆ ಗುಣಮಟ್ಟ ಕುಸಿದಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರವಿರುದ್ಧ ವೈಯಕ್ತಿಕ ಟೀಕೆ ಸಲ್ಲದು ಎಂದು ಬಿಜೆಪಿ ಸಹ ವಕ್ತಾರೆ ಮಾಳವಿಕಾ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಲೇ ನೊಂದಿರುವ ಅವರು ಹೋರಾಟ ಮಾಡುತ್ತಿದ್ದಾರೆ. ಆದರೆ ಅವರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸವಾಗುತ್ತಿದೆ ಎಂದರು.

ಕುಮಾರಸ್ವಾಮಿ ಅವರು ಕೇವಲ ನಿಖಿಲ್ ತಂದೆಯಂತೆ ವರ್ತಿಸದೆ ಜನರಿಗಾಗಿಯೂ ಕೆಲಸ ಮಾಡಬೇಕು. ಮಹದಾಯಿ ಸಮಸ್ಯೆ ಯನ್ನು ಪರಿಹರಿಸಲು ಪ್ರಯತ್ನಿಸಬೇಕು ಎಂದರು.

ADVERTISEMENT

ಕೊಲೆ ಪ್ರಕರಣದಲ್ಲಿ ಸಾಕ್ಷ್ಯನಾಶ ಆರೋಪ ಎದುರಿಸುತ್ತಿರುವ ವಿನಯ ಕುಲಕರ್ಣಿ ಅವರಿಗೆ ಏಕೆ ಟಿಕೆಟ್ ನೀಡಲಾಗಿದೆ ಎಂದು ರಾಹುಲ್ ಗಾಂಧಿಯವರೇ ಹೇಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.