ADVERTISEMENT

ರಾಜ್ಯಸಭೆಗೆ ಖರ್ಗೆ ಅವಿರೋಧ ಆಯ್ಕೆ; ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 16:36 IST
Last Updated 12 ಜೂನ್ 2020, 16:36 IST
ಕಾಂಗ್ರೆಸ್ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರವನ್ನು ಹಿಡಿದು ಪಕ್ಷದ ಕಚೇರಿ ಎದುರು ವಿಜಯೋತ್ಸವ ಆಚರಿಸಿದರು
ಕಾಂಗ್ರೆಸ್ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರವನ್ನು ಹಿಡಿದು ಪಕ್ಷದ ಕಚೇರಿ ಎದುರು ವಿಜಯೋತ್ಸವ ಆಚರಿಸಿದರು   

ಕಲಬುರ್ಗಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಪ್ರಯುಕ್ತ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಖರ್ಗೆ ಅವರ ಭಾವಚಿತ್ರ ಹಿಡಿದು ವಿಜಯೋತ್ಸವ ಆಚರಿಸಿದರು.

ಅತ್ತ ವಿಧಾನಸಭೆಯಲ್ಲಿ ಖರ್ಗೆ ಅವರು ಚುನಾವಣಾಧಿಕಾರಿಗಳಿಂದ ರಾಜ್ಯಸಭೆಗೆ ಆಯ್ಕೆಯಾದ ಬಗ್ಗೆ ಪ್ರಮಾಣಪತ್ರ ಸ್ವೀಕರಿಸುತ್ತಿದ್ದಂತೆಯೇ ನಗರದಲ್ಲಿ ಪಕ್ಷದ ಕಾರ್ಯಕರ್ತರ ಉತ್ಸಾಹ ಮೇರೆ ಮೀರಿತ್ತು.

ಪಟಾಕಿ ಸಿಡಿಸುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡರು. ಕ್ಷಣಾರ್ಧದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ಗಳನ್ನು ತಯಾರಿಸಿ ಶುಭಾಶಯಗಳನ್ನು ತಿಳಿಸಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಮಹಾಂತಪ್ಪ ಸಂಗಾವಿ, ನೀಲಕಂಠರಾವ ಮೂಲಗೆ, ರಾಜಗೋಪಾಲ ರೆಡ್ಡಿ, ಅರುಣಕುಮಾರ ಪಾಟೀಲ, ಡಾ.ಕಿರಣ ದೇಶಮುಖ, ಈರಣ್ಣ ಝಳಕಿ, ಜಿ. ವಿಜಯಕುಮಾರ, ಚಂದ್ರಶೇಖರ ಸುಲ್ತಾನಪೂರ, ಮಜರಖಾನ, ಮಾಪಣ್ಣಾ ಗಂಜಗೇರಿ, ಶಾಮರಾವ ನಾಟೀಕಾರ, ರಾಜೀವ ಜಾನೆ, ಜಗನ್ನಾಥ ಗೋಧಿ, ಶಿವಕುಮಾರ ಬಾಳಿ, ಮಲ್ಲಿಕಾರ್ಜುನ ಸಾಗರ, ಚಂದ್ರಿಕಾ ಪರಮೇಶ್ವರ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.