ಬೆಂಗಳೂರು:ವಿಧಾನಸೌಧದ3ನೇ ಮಹಡಿಯಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸೋಮವಾರ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಕಾರಣ ಇನ್ನೂ ನಿಖರವಾದ ತಿಳಿದುಬಂದಿಲ್ಲ.
ಕೊಠಡಿ ಸಂಖ್ಯೆ 332ರಲ್ಲಿ ಘಟನೆ ನಡೆದಿದೆ. ವಿಧಾನಸೌಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಭದ್ರತೆಯ ನಡುವೆಯೂ ವಿಧಾನಸೌಧದಲ್ಲಿ ಘಟನೆ ನಡೆದಿದೆ. ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ಲಾಸ್ಟಿಕ್ ಚೀಲದಲ್ಲಿ ಕೆಲವೊಂದು ದಾಖಲೆಗಳನ್ನು ಈ ವ್ಯಕ್ತಿ ತಂದಿದ್ದ. ಕುಸಿದು ಬಿದ್ದ ಜಾಗದಲ್ಲಿ ಗುಳಿಗೆಗಳು ಕೂಡ ಸಿಕ್ಕಿವೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿರೇವಣಕರ್. ಆತ ಚಿಕ್ಕಬಳ್ಳಾಪುರದವರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.