ADVERTISEMENT

ಮಂಡ್ಯ ಬಸ್ ದುರಂತ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2018, 10:56 IST
Last Updated 24 ನವೆಂಬರ್ 2018, 10:56 IST
   

ಮಂಡ್ಯ: ಪಾಂಡವಪುರ ಸಮೀಪದ ಕನಗನಮರಡಿ ಗ್ರಾಮದ ಹತ್ತಿರ ವಿ.ಸಿ. ನಾಲೆಗೆ ಖಾಸಗಿ ಬಸ್‌ ಉರುಳಿ ಮೃತಪಟ್ಟ 25 ಮಂದಿಯ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪರಿಹಾರ ಘೋಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

'ರಾಜ್‌ಕುಮಾರ್' ಹೆಸರಿನ ಬಸ್‌ನ ಸ್ಟೇರಿಂಗ್ ತುಂಡಾದ ಪರಿಣಾಮ ಬಸ್ ನಾಲೆಗೆ ಬಿದ್ದ ಪರಿಣಾಮ 25 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಹಗ್ಗ ಮತ್ತು ಕ್ರೇನ್‌ ಸಹಾಯದಿಂದ ಈವರೆಗೆ 23 ಶವಗಳನ್ನು ಹೊರ ತೆಗೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.