ಮಂಡ್ಯ: ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರಿಗೆಕೋವಿಡ್–19 ದೃಢಪಟ್ಟಿದ್ದು ನಗರದ ನಿವಾಸದಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರ ತಮ್ಮ ಕಾರು ಚಾಲಕನಿಗೆ ಕೋವಿಡ್ ದೃಢಪಟ್ಟಿದ್ದ ಕಾರಣ ಕಾರ್ಯಕ್ರಮಗಳಿಂದ ಹೊರಗುಳಿದು ಪರೀಕ್ಷೆ ಮಾಡಿಸಿಕೊಂಡಿದ್ದರು, ವರದಿ ಪಾಸಿಟಿವ್ ಬಂದಿದೆ. ಅವರ ಸಂಪರ್ಕಕ್ಕೆ ಬಂದಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಕೂಡ ಪರೀಕ್ಷೆ ಮಾಡಿಸಿಕೊಂಡಿದ್ದು ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಪ್ರತ್ಯೇಕವಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.