ADVERTISEMENT

ಮಂಡ್ಯ | ಕಾಮಗಾರಿ ವೇಳೆ ಜೆಸಿಬಿ ಚಾಲಕನಿಗೆ ಹಲ್ಲೆ ನಡೆಸಿದ ಮಾಜಿ ಶಾಸಕ ರಮೇಶ್ ಬಾಬು

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 8:41 IST
Last Updated 9 ಜುಲೈ 2020, 8:41 IST
ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಜೆಸಿಬಿ ಚಾಲಕನನ್ನು ಹಿಡಿದಿರುವುದು
ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಜೆಸಿಬಿ ಚಾಲಕನನ್ನು ಹಿಡಿದಿರುವುದು   
""
""
""
""

ಮಂಡ್ಯ: ಜೆಸಿಬಿ ಚಾಲಕನ ಮೇಲೆ ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹಲ್ಲೆ ನಡೆಸಿರುವ ಘಟನೆ ಅರೆಕೆರೆ ಗ್ರಾಮದಲ್ಲಿ ನಡೆದಿದೆ.

ಅರಕೆರೆ ಗ್ರಾಮದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಘಟನೆ ಮಾಜಿ ಶಾಸಕ ಹಾಗೂ ಅವರ ಬೆಂಬಲಿಗರಿಂದ ಕಾಮಗಾರಿಗೆ ತಡೆದಿದ್ದಾರೆ. ಪರಿಹಾರ ನೀಡದೆ ವಿಸ್ತರಣೆ ಬೇಡ ಎಂದು ಒತ್ತಾಯ ಮಾಡಿದ್ದಾರೆ. ಒತ್ತಾಯದ ನಡುವೆಯೂ ಜೆಸಿಬಿ ಚಾಲಕ ಮನೆ ತೆರವು ಮಾಡುತ್ತಿದ್ದ ಎನ್ನಲಾಗಿದೆ. ಈ ಸಮಯದಲ್ಲಿ ಜೆಸಿಬಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೂಡಲೆ ಭಯಗೊಂಡ ಚಾಲಕ ಜೆಸಿಬಿಯಿಂದ ಇಳಿದು ಓಡಲು ಆರಂಭಿಸಿದ್ದಾರೆ. ಕೂಡಲೆ ಆತನತ್ತ ಓಡಿದ ಮಾಜಿ ಶಾಸಕ ಚಾಲಕನನ್ನು ಹಿಡಿದು ಹಲ್ಲೆ ನಡೆಸಿದ್ದಾರೆ.

'ಮಹಿಳೆಯೊಬ್ಬರ ಮೇಲೆ ಜೆಸಿಬಿ ಹತ್ತಿಸಲು ಯತ್ನಿಸಿದ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದೆವು' ಎಂದು ರಮೇಶ್ ಬಾಬು ಬಂಡಿಸಿದ್ದೇಗೌಡ ತಿಳಿಸಿದರು.

ADVERTISEMENT
ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಜೆಸಿಬಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.