ADVERTISEMENT

ಮಂಡ್ಯ ಉಸ್ತುವಾರಿ ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸಿ: ಮುಖ್ಯಮಂತ್ರಿಗೆ ಅಶೋಕ ಮನವಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 10:18 IST
Last Updated 10 ಫೆಬ್ರುವರಿ 2023, 10:18 IST
ಸಚಿವ ಆರ್. ಅಶೋಕ
ಸಚಿವ ಆರ್. ಅಶೋಕ   

ಬೆಂಗಳೂರು: ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಂದಾಯ ಸಚಿವ ಆರ್. ಅಶೋಕ ಪತ್ರ ಬರೆದು ಕೇಳಿಕೊಂಡಿದ್ದಾರೆ.

14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ, ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಹಾಗೂ ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಉದ್ದೇಶದಿಂದ ನೇಮಿಸಲಾಗಿರುವ ಸಮಿತಿಗೂ ಅಧ್ಯಕ್ಷರಾಗಿದ್ದಾರೆ.

ಕಂದಾಯ ಇಲಾಖೆ ಪ್ರಾರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕನಿಷ್ಠ ಎರಡು– ಮೂರು ಜಿಲ್ಲೆಗಳಲ್ಲಿ ತಾವು ವಾಸ್ತವ್ಯ ಹೂಡಬೇಕಾಗಿರುವುದರಿಂದ ಮಂಡ್ಯ ಉಸ್ತುವಾರಿ ಹೊಣೆ ನಿಭಾಯಿಸುವುದು ಹೊರೆಯಾಗುತ್ತದೆ ಎಂದು ಅವರು ಬರೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.