ADVERTISEMENT

ಅಕ್ರಮ ಗಣಿಗಾರಿಕೆ ಪರಿಣಾಮ ಕುರಿತ ಪ್ರಜಾವಾಣಿ ವರದಿ ಉಲ್ಲೇಖಿಸಿ ಸುಮಲತಾ ಟ್ವೀಟ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 7:34 IST
Last Updated 11 ಜುಲೈ 2021, 7:34 IST
ಸಂಸದೆ ಸುಮಲತಾ ಅಂಬರೀಷ್‌
ಸಂಸದೆ ಸುಮಲತಾ ಅಂಬರೀಷ್‌   

ಬೆಂಗಳೂರು:ಕೆಆರ್‌ಎಸ್‌ ಅಣೆಕಟ್ಟೆ ಸಮೀಪದಲ್ಲಿರುವ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಪ್ರಜಾವಾಣಿಯಲ್ಲಿ ಪ್ರಕಟವಾಗಿರುವ ವರದಿಯನ್ನು ಉಲ್ಲೇಖಿಸಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಟ್ವೀಟ್‌ ಮಾಡಿದ್ದಾರೆ.

ಕೆಲವೇ ಜನರ ದುರಾಸೆಗೆ, ಸ್ವಾರ್ಥಕ್ಕೆ ನಮ್ಮ ಜನರಹಾಗೂ ಮಕ್ಕಳ ಭವಿಷ್ಯ ಬಲಿಯಾಗಲು ಬಿಡಬಾರದು ಎಂದು ಮನವಿ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ,ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ.ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆʼ ಎನ್ನುವ ಮೂಲಕ ವಿರೋಧಿಗಳತ್ತ ಚಾಟಿ ಬೀಸಿದ್ದಾರೆ.

ADVERTISEMENT

ಗಣಿಗಾರಿಕೆ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಜೆಡಿಎಸ್‌ ನಾಯಕರ ನಡುವೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.