ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಬೆಂಬಲಿಗರು ಬಿಜೆಪಿ ಸೇರುತ್ತಿದ್ದು, ಮುಂದಿನ ದಿನಗಳಲ್ಲಿ ಸಂಸದೆಯೂ ಬಿಜೆಪಿ ಸೇರಬಹುದು ಎಂದು ಯೋಗೇಶ್ವರ್ ಆಶಾಭಾವ ವ್ಯಕ್ತಪಡಿಸಿದರು.
‘ ಸುಮಲತಾ ಮಂಡ್ಯ ಅಭಿವೃದ್ಧಿ ದೃಷ್ಟಿಯಿಂದ ಹಲವು ಯೋಜನೆಗಳ ಕುರಿತು ಮುಖ್ಯಮಂತ್ರಿ ಜೊತೆ ಮಾತನಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈಗಲೇ ಪಕ್ಷದ ಜೊತೆ ಗುರುತಿಸಿಕೊಳ್ಳಲು ಅವರಿಗೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ನಿರ್ಧಾರ ತೆಗೆದುಕೊಳ್ಳಬಹುದು’ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ ಮಾಜಿ ಶಾಸಕ ಬಾಲಕೃಷ್ಣ ಅವರನ್ನು ಈ ಹಿಂದೆ ಬಿಜೆಪಿ ಸೇರುವಂತೆ ಆಹ್ವಾನ ನೀಡಲಾಗಿತ್ತು, ಆದರೆ ಅವರು ಅಷ್ಟು ಆಸಕ್ತಿ ತೋರಲಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.