ADVERTISEMENT

ಮನ್‌ಮುಲ್‌: ಎಸ್‌.ಎಂ.ಕೃಷ್ಣ ಬೆಂಬಲಿಗನಿಗೆ ಕೊಕ್‌

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 18:30 IST
Last Updated 16 ಸೆಪ್ಟೆಂಬರ್ 2019, 18:30 IST

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮನ್‌ಮುಲ್‌) ಆಡಳಿತ ಮಂಡಳಿಯ ನಾಮ ನಿರ್ದೇಶಿತ ನಿರ್ದೇಶಕನನ್ನು ಸರ್ಕಾರ ಬದಲಾವಣೆ ಮಾಡಿದೆ.‌

ಬಿಜೆಪಿ ಮುಖಂಡ ಎಸ್‌.ಎಂ.ಕೃಷ್ಣ ಬೆಂಬಲಿಗ, ಸೋಮನಹಳ್ಳಿ ಗ್ರಾಮದ ಎನ್‌.ಸಿ. ಪ್ರಸನ್ನಕುಮಾರ್‌ ನೇಮಕಾತಿಯನ್ನು ರದ್ದು ಮಾಡಲಾಗಿದ್ದು, ಅವರ ಜಾಗಕ್ಕೆ ಕೆ.ಆರ್‌.ಪೇಟೆ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಅವರ ಬೆಂಬಲಿಗ ಕೆ.ಜಿ.ತಮ್ಮಣ್ಣ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT