ADVERTISEMENT

ಮುಂಬೈನಿಂದ ತಂದ ಶವ ಸಂಸ್ಕಾರದಲ್ಲಿ ಭಾಗಿಯಾಗಿದ್ದ ಮಹಿಳೆಗೆ ಸೋಂಕು, ಸೋಂಕಿತರು 26

​ಪ್ರಜಾವಾಣಿ ವಾರ್ತೆ
Published 1 ಮೇ 2020, 9:29 IST
Last Updated 1 ಮೇ 2020, 9:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಡ್ಯ: ಜಿಲ್ಲೆಯಲ್ಲಿ ಒಂದೇ ದಿನ ಎಂಟು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯು 26ಕ್ಕೆ ಏರಿಕೆಯಾಗಿದೆ.

ಏಪ್ರಿಲ್ 24ರಂದು ಮುಂಬೈನಿಂದ ಶವ ತಂದು ಮೇಲುಕೋಟೆ ಬಳಿಯ ಕೊಡಗಳ್ಳಿಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಮುಂಬೈನಲ್ಲಿ ಮೃತಪಟ್ಟ ವ್ಯಕ್ತಿಗೆ ಕೋವಿಡ್-19 ಇತ್ತೇ ಎಂಬುದು ಗೊತ್ತಾಗಿಲ್ಲ. ಮಹಾರಾಷ್ಟ್ರದ ಆಂಬುಲೆನ್ಸ್ ಮೂಲಕ ಶವ ತರಲಾಗಿತ್ತು

ಮುಂಬೈನಿಂದ ಬಂದ ನಾಲ್ವರಿಗೆ ಕೋವಿಡ್-19 ದೃಢಪಟ್ಟಿದ್ದು, 179ನೇ ರೋಗಿಯ ಸಂಪರ್ಕದಿಂದ ಮಳವಳ್ಳಿಯಲ್ಲಿ ನಾಲ್ವರಿಗೆ ಸೋಂಕು ತಗುಲಿದೆ. ಈ ಮೂಲಕ ಮಳವಳ್ಳಿ ಪಟ್ಟಣವೊಂದರಲ್ಲೇ 19 ಮಂದಿಗೆ ಕೋವಿಡ್-19 ತಗುಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.