ADVERTISEMENT

ಮಂಗಳೂರು ಸ್ಫೋಟ: ಸಂತ್ರಸ್ತ ರಿಕ್ಷಾ ಚಾಲಕನಿಗೆ ಗೃಹ ಸಚಿವರಿಂದ ₹50,000 ನೆರವು

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 8:30 IST
Last Updated 23 ನವೆಂಬರ್ 2022, 8:30 IST
   

ಮಂಗಳೂರು: ನಗರದ ಗರೋಡಿಯಲ್ಲಿ ನ. 19ರಂದು ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಬುಧವಾರ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಿದರು.

ಇದಕ್ಕೂ ಮೊದಲು ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT