ADVERTISEMENT

ಮಂಗಳೂರು ಬಾಂಬ್‌ ಪ್ರಕರಣ: ಎಲ್ಲಾ ಆಯಾಮಗಳಿಂದ ತನಿಖೆ– ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 10:10 IST
Last Updated 23 ಜನವರಿ 2020, 10:10 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಳಗಾವಿ: ಮಂಗಳೂರು ಬಾಂಬ್‌ಪ್ರಕರಣದ ತನಿಖೆಯನ್ನುತೀವ್ರಗೊಳಿಸಿದಾಗ ಆರೋಪಿ ತಾನಾಗಿಯೇ ಬಂದು ಶರಣಾಗಿದ್ದುತನಿಖೆ ಪೂರ್ಣವಾದ ಬಳಿಕ ಸ್ಪಷ್ಟ ಮಾಹಿತಿ ದೊರೆಯಲಿದೆಎಂದು ಗೃಹಸಚಿವ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದಕ್ಕಿಂತ ಮುಂಚೆ ಅವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವ ಬಗ್ಗೆ ಹುಸಿ ಕರೆ ಮಾಡಿ ಶಿಕ್ಷೆ ಅನುಭವಿಸಿದ್ದಾರೆ. ತನಿಖೆ ಕೈಗೊಳ್ಳಲು ಮೂರು ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ’ ಎಂದು ನುಡಿದರು.

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್‌ನವರು ಹಾಗೂ ಎಚ್‌.ಡಿ. ಕುಮಾರಸ್ವಾಮಿ ಪೈಪೋಟಿ ನಡೆಸಿದ್ದಾರೆ. ವಿರೋಧ ಪಕ್ಷಗಳ ನಾಯಕರು ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ADVERTISEMENT

ಮಂಗಳೂರು ಪ್ರಕರಣದಲ್ಲಿ ರಾಜಕೀಯ ಮಾಡಲಾಗುತ್ತಿದೆ. ರಾಜಕೀಯ ಮಾಡುವ ಭರಾಟೆಯಲ್ಲಿ ದೇಶದ್ರೋಹಿ ಕೃತ್ಯಗಳಿಗೆ ಪ್ರಚೋದನೆ ಕೊಡಬಾರದು. ಕುಮಾರಸ್ವಾಮಿ ಅವರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.