ಮಂಗಳೂರು: ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ.
ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್ ಮೂಲಕ ತಲಾ ₹ 5 ಲಕ್ಷ ಪರಿಹಾರ ನೀಡಿದ್ದಾರೆ.
ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಗಲಭೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಯುವಕರು ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.