ADVERTISEMENT

ಪ್ರತಿಭಟನೆ: ಸಂಸದ ಬಿನೋಯ್ ಸೇರಿ ಹಲವರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 19:56 IST
Last Updated 21 ಡಿಸೆಂಬರ್ 2019, 19:56 IST
ಪ್ರತಿಭಟನೆ ನಡೆಸಲು ಯತ್ನಿಸಿದ ಸಂಸದ ಬಿನೋಯ್‌ ವಿಶ್ವಂ ಸೇರಿದಂತೆ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದರು
ಪ್ರತಿಭಟನೆ ನಡೆಸಲು ಯತ್ನಿಸಿದ ಸಂಸದ ಬಿನೋಯ್‌ ವಿಶ್ವಂ ಸೇರಿದಂತೆ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದರು   

ಮಂಗಳೂರು: ನಗರದಲ್ಲಿ ಕರ್ಫ್ಯೂ ವಿಧಿಸಿದ್ದರೂ, ಪ್ರತಿಭಟನೆಗೆ ಯತ್ನಿಸಿದ ರಾಜ್ಯಸಭಾ ಸದಸ್ಯರೂ ಆಗಿರುವ ಕೇರಳದ ಬಿನೋಯ್‌ ವಿಶ್ವಂ ಸೇರಿದಂತೆ ಆರು ಜನ ಸಿಪಿಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ನಗರದಲ್ಲಿ ಗುರುವಾರ ನಡೆದ ಹಿಂಸಾಚಾರವನ್ನು ಖಂಡಿಸಿ ಸಿಪಿಐ ಮುಖಂಡರು ಶನಿವಾರ ಪಾಲಿಕೆಯ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು.

ಬಿನೋಯ್‌ ಅವರ ಜೊತೆ ಜ್ಯೋತಿ ಕೆ., ಜ್ಯೋತಿ ಎ., ಜನಾರ್ದನ್ ಕೆ.ಎಸ್., ಸಂತೋಷ್ ಎಚ್.ಎಂ., ಸಾತಿ ಸುಂದರೇಶ್ ಅವರನ್ನೂ ಪೊಲೀಸರು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.