ADVERTISEMENT

ಬಿಜೆಪಿ ಸೇರ್ಪಡೆ: ಮಂಜು ಸುಳಿವು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2019, 20:32 IST
Last Updated 17 ಫೆಬ್ರುವರಿ 2019, 20:32 IST
   

ಶನಿವಾರಸಂತೆ: ‘ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಆದರೆ, ರಾಜಕೀಯ ನಿಂತ ನೀರಲ್ಲ. ಒಂದು ವೇಳೆ ಪ್ರಜ್ವಲ್‌ ರೇವಣ್ಣಗೆ ಟಿಕೆಟ್ ನೀಡಿದರೆ ಪರ್ಯಾಯ ದಾರಿ ನೋಡಿಕೊಳ್ಳುತ್ತೇನೆ’ ಎಂದು ಕಾಂಗ್ರೆಸ್‌ ಮುಖಂಡ ಎ.ಮಂಜು ತಿಳಿಸಿದರು.

ಈ ಮೂಲಕ ಬಿಜೆಪಿ ಸೇರುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದರು. ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಸ್ಪರ್ಧಿಸಿದರೆ ಮಾತ್ರ ಸಹಕಾರ ನೀಡುತ್ತೇನೆ’ ಎಂದು ಅವರು ಹೇಳಿದರು.

‘ದೇವೇಗೌಡರ ಕುಟುಂಬದ ಮೇಲೆ ನನಗೆ ವೈಯಕ್ತಿಕ ದ್ವೇಷವಿಲ್ಲ. ರಾಜಕೀಯವಾಗಿ ಅವರ ಕುಟುಂಬ ನಮ್ಮ ಎದುರಾಳಿ ಅಷ್ಟೇ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.