ADVERTISEMENT

ಮಂತ್ರಾಲಯ: ರಾಯರ ವೈಭವದ ಪೂರ್ವಾರಾಧನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 23:30 IST
Last Updated 12 ಆಗಸ್ಟ್ 2022, 23:30 IST
ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ದಿನವಾದ ಶುಕ್ರವಾರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮೂಲವೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ನೆರವೇರಿಸಿದರು
ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ದಿನವಾದ ಶುಕ್ರವಾರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮೂಲವೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ನೆರವೇರಿಸಿದರು   

ರಾಯಚೂರು: ರಾಘವೇಂದ್ರ ಸ್ವಾಮಿಯವರ 351ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಮಂತ್ರಾಲಯದಲ್ಲಿ ಶುಕ್ರವಾರ ಪೂರ್ವಾರಾಧನೆಯು ವೈಭವದಿಂದ ನೆರವೇರಿತು.

ರಾಯರ ಮೂಲ ವೃಂದಾವನಕ್ಕೆ ವಿಶೇಷ ಪೂಜೆ, ಮಹಾಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ ಮತ್ತು ವಸ್ತ್ರಾಲಂಕಾರವನ್ನು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ವಿಧಿವತ್ತಾಗಿ ನೆರವೇರಿಸಿದರು.

ಮೂಲರಾಮದೇವರ ಪೂಜೆ, ಮಂಗಳಾರತಿ ನಡೆಯಿತು. ಪ್ರಾಕಾರದಲ್ಲಿ ನಡೆದ ರಥೋತ್ಸವದಲ್ಲಿ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಮಠದ ಹೊರಭಾಗ ಸಂಜೆ ಯೋಗೀಂದ್ರ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 10 ವಿದ್ವಾಂಸರಿಗೆ ‘ಶ್ರೀರಾಘವೇಂದ್ರಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಬೆಂಗಳೂರಿನ ವಿದ್ವಾನ್‌ ಮಳಗಿ ರಾಮಾಚಾರ್‌, ಮೈಸೂರಿನ ವಿದ್ವಾನ್‌ ಸಿ.ಎಚ್‌.ಶ್ರೀನಿವಾಸಮೂರ್ತಿ ಮತ್ತು ಹುಬ್ಬಳ್ಳಿಯ ಹೃದ್ರೋಗ ತಜ್ಞ ಡಾ.ವಿ.ಜಿ.ನಾಡಗೌಡ ಸೇರಿ ದೇಶದ ವಿವಿಧ ರಾಜ್ಯಗಳ ವಿದ್ವಾಂಸರು ಪ್ರಶಸ್ತಿ ಸ್ವೀಕರಿಸಿದರು. ರಾಯರ ಮಧ್ಯಾರಾಧನೆ ದಿನವಾದ ಶನಿವಾರ, ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದ ಅರ್ಚಕರು ಶೇಷವಸ್ತ್ರದೊಂದಿಗೆ ಮಂತ್ರಾಲಯಕ್ಕೆ ಬರುವರು. ರಾಯರಿಗೆ ಸಮರ್ಪಿಸಲು ಸುಬುಧೇಂದ್ರ ತೀರ್ಥರಿಗೆ ಶೇಷವಸ್ತ್ರ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.