ADVERTISEMENT

ಕೆಲ ಶಾಸಕರು, ಮುಖಂಡರಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 18:37 IST
Last Updated 18 ಏಪ್ರಿಲ್ 2021, 18:37 IST
ಮಂಜುನಾಥ್
ಮಂಜುನಾಥ್   

ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್‌ಗೆ ತೆರಳುವ ಮುನ್ನ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ಪಾಸಿಟಿವ್ ಆಗಿದ್ದು, ಸದ್ಯ ಮನೆಯಲ್ಲಿ ವಿಶ್ರಾಂತಿ‌ ಪಡೆಯುತ್ತಿದ್ದಾರೆ.

ಮಂಗಳೂರು ವರದಿ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಹಾಗೂ ಕಾಂಗ್ರೆಸ್‌ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಕೆ. ಹರೀಶ್‌ಕುಮಾರ್‌ ಅವರಿಗೆ ಭಾನುವಾರ ಕೋವಿಡ್‌–19 ದೃಢಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.