ADVERTISEMENT

Photos| ಕರ್ನಾಟಕದಲ್ಲಿ ಇಂದು ಮಾಸ್ಕ್‌ ದಿನ

ಬೆಂಗಳೂರು: ಕೊರೊನಾ ವೈರಸ್‌ (ಕೋವಿಡ್‌–19) ವಿರುದ್ಧದ ಹೋರಾಟದಲ್ಲಿ ಮಾಸ್ಕ್‌ ಬಳಕೆಯ ಅನಿವಾರ್ಯತೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕದಾದ್ಯಂತ ಇಂದು ‘ಮಾಸ್ಕ್‌ ದಿವಸ’ ಆಚರಿಸಲಾಗುತ್ತಿದೆ.ರಾಜ್ಯದ ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಮಾಸ್ಕ್‌ ದಿನ ಆಚರಣೆಯಾಗುತ್ತಿದ್ದು, ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬೆಂಗಳೂರಿನ ವಿಧಾನಸೌಧ ಬಳಿಯ ಅಂಬೇಡ್ಕರ್‌ ಪ್ರತಿಮೆ ಎದುರು ಇದಕ್ಕೆ ಚಾಲನೆ ನೀಡಿದ್ದಾರೆ.ಮಾಸ್ಕ ದಿನ ಆಚರಿಸುವ ಬಗ್ಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸೋಮವಾರವೇ ಮಾಧ್ಯಮಗಳಿಗೆ ತಿಳಿಸಿದ್ದರು. ‘ಮಾಸ್ಕ್‌ ಧರಿಸುವ ಅಗತ್ಯದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿ ‘ಮಾಸ್ಕ್‌ ದಿನ’ ಆಚರಿಸಲು ನಿರ್ಧರಿಸಲಾಗಿದೆ. ಯಾರು ಮಾಸ್ಕ್‌ ಧರಿಸುವುದಿಲ್ಲವೋ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ₹200 ದಂಡ ವಿಧಿಸಲಾಗುವುದು,’ ಎಂದು ತಿಳಿಸಿದ್ದರು.

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 6:25 IST
Last Updated 18 ಜೂನ್ 2020, 6:25 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.