ADVERTISEMENT

ಬಿಳಿಮಲೆ, ಸಂಧ್ಯಾಪೈ ಸೇರಿ ಆರು ಜನರಿಗೆ ಮಾಸ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 19:52 IST
Last Updated 15 ಫೆಬ್ರುವರಿ 2021, 19:52 IST
   

ಬೆಂಗಳೂರು: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ ವತಿಯಿಂದ ನೀಡಲಾಗುವ ಈ ಸಾಲಿನ ‘ಮಾಸ್ತಿ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಪುರಸ್ಕೃತರು: ಲೇಖಕಿ ಹಾಗೂ ‘ತರಂಗ‘ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌.ಪೈ (ಶಿಶು ಸಾಹಿತ್ಯ), ವಿಮರ್ಶಕ ಎಸ್‌.ಆರ್.ವಿಜಯಶಂಕರ (ವಿಮರ್ಶೆ), ಪುರುಷೋತ್ತಮ ಬಿಳಿಮಲೆ (ಸಂಶೋಧನೆ), ಕವಿ ಸುಬ್ರಾಯ ಚೊಕ್ಕಾಡಿ (ಕಾವ್ಯ), ಕಥೆಗಾರ ಕೇಶವರೆಡ್ಡಿ ಹಂದ್ರಾಳ (ಕಥೆ) ಹಾಗೂ ಸಾಹಿತಿ ಸ.ರಘುನಾಥ (ಸೃಜನಶೀಲ).

‘ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿವೆ. ಮಾರ್ಚ್‌ 27ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ’ ಎಂದುಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.