ಬೆಂಗಳೂರು: ‘ಸಿ.ಟಿ. ರವಿ ಅವರು ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸರಿಯಲ್ಲ. ನಾವು ಕೂಡ ಪ್ರತಿಭಟನೆ ಆರಂಭಿಸಿದರೆ ಸಿ.ಟಿ ರವಿ ಹೊರಗೆ ಬರಲು ಸಾಧ್ಯವಾಗುವುದಿಲ್ಲ’
ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ವಿರುದ್ಧ ರಾಜಕೀಯವಾಗಿ ಸಿ.ಟಿ. ರವಿ ಮಾತನಾಡಿದ್ದಾರೆ. ಆದರೆ, ಇಂಥ ಮಾತು
ಸರಿಯಲ್ಲ. ಇದನ್ನು ಇಲ್ಲಿಗೇ ನಿಲ್ಲಿಸಿದರೆ ಸರಿ, ಇಲ್ಲದಿದ್ದರೆ ಮತ್ತಷ್ಟು ವಿಕೋಪಕ್ಕೆ ಹೋಗಬಹುದು’ ಎಂದಿದ್ದಾರೆ.
‘ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದಾಗ, ಕಾಂಗ್ರೆಸ್ ಅವಧಿಯಲ್ಲೂ ಇರಲಿಲ್ಲವೇ ಎನ್ನುತ್ತಾರೆ. ಹಾಗಾದರೆ, ಆಗ ವಿರೋಧ ಪಕ್ಷದಲ್ಲಿ ಇದ್ದವರು ಯಾಕೆ ಸುಮ್ಮನಿದ್ದರು’ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.