ಬೆಂಗಳೂರು: ಮೀ–ಟೂ ಆರೋಪಕ್ಕೆ ಸಂಬಂಧಿಸಿದಂತೆ ನಟಿ ಶ್ರುತಿ ಹರಿಹರನ್ ಬುಧವಾರ ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿ ನೀಡಿದ ಹೇಳಿಕೆಯನ್ನು ನ್ಯಾಯಾಧೀಶ ಗೋಪಾಲ ಕೃಷ್ಣ ಅವರು ದಾಖಲಿಸಿ ಕೊಂಡು ವಿಚಾರಣೆಯನ್ನು ನವೆಂಬರ್ 9ಕ್ಕೆ ಮುಂದೂಡಿದರು.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪಿಎಸ್ಐ ರೇಣುಕಾ ಅವರೊಂದಿಗೆ ಶ್ರುತಿ ನ್ಯಾಯಾಲಯಕ್ಕೆ ಹಾಜರಾಗಿದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರಿಗೆ ಎಲ್ಲ ಅಂಶಗಳನ್ನು ಹೇಳಿದರು.
ವಿಚಾರಣೆ ಸಂದರ್ಭದಲ್ಲಿ, ತನಿಖೆ ಸಂದರ್ಭದಲ್ಲಿ ಹೇಳಿಕೆ ಬದಲಾಯಿಸಲು ಅವಕಾಶವಿರುವುದಿಲ್ಲ. ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳು ದೊರೆತರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ನ್ಯಾಯಾಧೀಶರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.