ಮೈಸೂರು: ಮೈಸೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಎಂ.ಎಡ್ ಮೊದಲ ಸೆಮಿಸ್ಟರ್ನ ‘ಶಿಕ್ಷಣ ಅಧ್ಯಯನ’ ವಿಷಯದಲ್ಲಿ ಮರು ಪರೀಕ್ಷೆ ನಡೆಸುವಂತೆ ವಿ.ವಿ ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ಸೂಚನೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಪುನರಾವರ್ತನೆ ಆಗಿರುವ ಸಂಬಂಧ ಬುಧವಾರ ಕುಲಪತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
2017ರ ಡಿಸೆಂಬರ್ನಲ್ಲಿ ನಡೆದ ಪರೀಕ್ಷೆಗೆ ಬಳಸಿದ ಪ್ರಶ್ನೆಗಳನ್ನೇ ಈ ವರ್ಷದ ಪರೀಕ್ಷೆಗೆ ಮತ್ತೆ ಕೇಳಲಾಗಿದೆ. ಎಲ್ಲಾ ಪ್ರಶ್ನೆಗಳು ಯಥಾವತ್ ಮುದ್ರಣವಾಗಿರುವ ಕುರಿತು ‘ಪ್ರಜಾವಾಣಿ’ಯ ಡಿ.26ರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು.
‘ಶಿಕ್ಷಣ ಅಧ್ಯಯನ ವಿಷಯದಲ್ಲಿ ಮರು ಪರೀಕ್ಷೆಗೆ ಸದ್ಯದಲ್ಲೇ ದಿನಾಂಕ ನಿಗದಿಪಡಿಸಲಾಗುವುದು. ಪುನರಾವರ್ತನೆ ಸಂಬಂಧಿಸಿದಂತೆ ವರದಿ ನೀಡಲು ಶಿಕ್ಷಣ ವಿಭಾಗಕ್ಕೆ ಸೂಚನೆ ನೀಡಿದ್ದೇನೆ. ಡಿ.28ರಂದು ನಡೆಯಲಿರುವ ಸಿಂಡಿಕೇಟ್ ಸಭೆಯಲ್ಲಿ ಈ ವರದಿ ಇಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಪ್ರೊ.ಹೇಮಂತಕುಮಾರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.