ಬೆಂಗಳೂರು: ಸಿ.ಡಿ.ಪ್ರಕರಣದ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿದೆ.
ತನಿಖಾಧಿಕಾರಿಯಾದ ಎಂ.ಸಿ. ಕವಿತಾ ಅವರು ಯುವತಿಯನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ವೈದ್ಯರ ತಂಡ ಯುವತಿಯನ್ನು ಪರೀಕ್ಷೆಗೆ ಒಳಪಡಿಸಲಿದೆ.
ನಂತರ, ಮಹಜರು ಪ್ರಕ್ರಿಯೆಗಾಗಿ ಯುವತಿಯನ್ನು ಪೊಲೀಸರು ಕರೆದೊಯ್ಯಲಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.