ದಕ್ಷಿಣ ಭಾರತದಲ್ಲೇ ಎತ್ತುಗಳ (ಹೋರಿಗಳ) ಜಾತ್ರೆಗೆ ಹೆಸರಾಗಿರುವ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ತುಂಬು ಜಾತ್ರೆ ನಡೆಯುತ್ತಿದ್ದು, ಈಗಾಗಲೇ ದೂರದ ಊರುಗಳಿಂದ ಜಾತ್ರೆಗೆ ಹೋರಿಗಳೊಂದಿಗೆ ರೈತರು ಬರುತ್ತಿದ್ದಾರೆ. ಘಾಟಿ ಕ್ಷೇತ್ರದಲ್ಲಿ ರೈತರು ತಮ್ಮ ರಾಸುಗಳನ್ನು ವ್ಯಾಪಾರಕ್ಕಾಗಿ ಕಟ್ಟುವ ಸ್ಥಳದಲ್ಲಿ ಹೈಟೆಕ್ ಮಾದರಿಯ ಪೆಂಡಾಲ್ಗಳನ್ನು ಸಿದ್ಧಪಡಿಸಲಾಗಿದ್ದು. ಈ ಬಾರಿ ಹಳ್ಳಿಕಾರ್ ಹೋರಿ ಎಂಟೂವರೆ ಲಕ್ಷಕ್ಕೆ ಮಾರಾಟವಾಗಿ ಎಲ್ಲರ ಗಮನ ಸೆಳೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.