ಬೆಂಗಳೂರು: ಫೆಬ್ರುವರಿ 27ರಂದು ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಪಾದಯಾತ್ರೆ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಫೆ. 27ಕ್ಕೆ ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳುತ್ತಿದ್ದು, ರಾಮನಗರದಿಂದ ಬೆಂಗಳೂರಿನವರೆಗೂ ಉಳಿದ 6 ದಿನಗಳ ಪಾದಯಾತ್ರೆ ನಡೆಯಲಿದೆ’ ಎಂದು ಹೇಳಿದೆ.
ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜ.9ರಂದು ಪಾದಯಾತ್ರೆ ಸಂಗಮದಿಂದ ಆರಂಭವಾಗಿತ್ತು. ರಾಮನಗರದ ಮಾರ್ಗವಾಗಿ ಬೆಂಗಳೂರಿಗೆ ತಲುಪಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಸರ್ಕಾರ ಪಾದಯಾತ್ರೆಯನ್ನು ನಿಷೇಧಿಸಿತ್ತು.
ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಪಾದಯಾತ್ರೆಯನ್ನು ಮುಂದುವರಿಸಲು ತೀರ್ಮಾನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.