ADVERTISEMENT

ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 5:38 IST
Last Updated 13 ಜನವರಿ 2022, 5:38 IST
ಕನಕಪುರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸ
ಕನಕಪುರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸ   

ರಾಮನಗರ: ಪಾದಯಾತ್ರೆ ಮುಂದುವರಿಸದಂತೆ ಸೂಚಿಸಿ ರಾಮನಗರ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.

ಅಧಿಕಾರಿಗಳ ತಂಡವು ಬುಧವಾರ ರಾತ್ರಿಯೇ ನೋಟಿಸ್ ಹಿಡಿದು ಕನಕಪುರದಲ್ಲಿ ಇರುವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ತೆರಳಿತು. ಈ ವೇಳೆ ಶಿವಕುಮಾರ್ ಹಾಗೂ ಸುರೇಶ್ ಇಬ್ಬರೂ ಮನೆಯಲ್ಲೇ ಇದ್ದರು. ಆದರೆ ಪೊಲೀಸರಿಂದ ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅವರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.