ಬೆಳಗಾವಿ: ಪಾಕಿಸ್ತಾನದ ಪರ ಸಂದೇಶಗಳನ್ನು ವಾಟ್ಸ್ಆ್ಯಪ್ ಗ್ರೂಫ್ನಲ್ಲಿ ಹರಿಯಬಟ್ಟ ಆರೋಪದ ಮೇಲೆ ಸವದತ್ತಿ ತಾಲ್ಲೂಕಿನ ಶಿವಾಪುರದ ಗ್ರಾಮದಲ್ಲಿ ಮಹಿಳೆಯನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳೆಯ ಈ ಕೃತ್ಯದಿಂದ ಆಕ್ರೋಶಗೊಂಡ ಕೆಲವು ಗ್ರಾಮಸ್ಥರು ಅವರ ಮಹಿಳೆಯ ಮನೆಯ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಲು ಪ್ರಯತ್ಸಿಸಿದರು. ಪೊಲೀಸರು ಮಧ್ಯೆ ಪ್ರವೇಶಿಸಿ ಅನಾಹುತ ತಡೆದಿದ್ದಾರೆ.
‘ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಆರು ಜನರನ್ನು ಪೊಲೀಸರು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.