ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿರುವ ಸಂದೇಶ ವೈರಲ್ ಆಗಿದೆ.
ಅಮಿತ್ ಶಾ ಅವರಿಗೆ ಕೋವಿಡ್–19 ತಗುಲಿರುವ ಹಿನ್ನೆಲೆಯಲ್ಲಿ ಈ ಸಂದೇಶವನ್ನು ಪೋಸ್ಟ್ ಮಾಡಲಾಗಿದ್ದು, ‘ಶಾಸಕರ ಖರೀದಿ ಕೇಂದ್ರವನ್ನು 14 ದಿನಗಳವರೆಗೆ ಮುಚ್ಚಲಾಗಿದೆ. ಮ್ಯಾನೇಜರ್ಗೆ ಕೊರೊನಾ ಪಾಸಿಟಿವ್ ಕಂಡುಬಂದಿರುವ ಕಾರಣ. ಹೀಗಾಗಿ ಯಾವುದೇ ಅನ್ಯಪಕ್ಷದ ಶಾಸಕರು ಸಂಪರ್ಕಿಸಬಾರದೆಂದು ಕೋರುತ್ತೇನೆ’ ಎಂದು ಉಲ್ಲೇಖಿಸಲಾಗಿದೆ.
ಇದಕ್ಕೆ ಪ್ರತಿಯಾಗಿ ಮತ್ತೊಬ್ಬರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸಂದೇಶ ಪೋಸ್ಟ್ ಮಾಡಿದ್ದಾರೆ.
‘ಅದೇ ರೀತಿ ನಿದ್ದೆರಾಮಯ್ಯನವರನ್ನೂ ಯಾವುದೇ ಕಾರ್ಯಕ್ರಮಕ್ಕೆ ಕರಿಯಬೇಡಿ. 14 ದಿನಗಳವರೆಗೆ ಅಮಿತ್ ಶಾ ಸೂಪರ್ ಬೆಡ್ ಕೊಡಿಸಿದ್ದಾರೆ. 14 ದಿನದವರೆಗೆ ನಿದ್ದೆ ಮಾಡುವುದೇ ನನ್ನ ಕೆಲಸ ಅಭಿಮಾನಿಗಳು ಸಹಕರಿಸಬೇಕಾಗಿ ವಿನಂತಿ ಇಂತಿ– ಗುಲಾಮ’ ಎಂದು ಬರೆಯಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.