ADVERTISEMENT

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 21:51 IST
Last Updated 19 ಮಾರ್ಚ್ 2022, 21:51 IST
ಮೈಸೂರು ನಗರದಲ್ಲಿ ಶನಿವಾರ ಸುರಿದ ಮಳೆಯಿಂದ ಜಲಾವೃತಗೊಂಡ ರಸ್ತೆಯನ್ನು ಮಹಿಳೆಯರು ದಾಟಿದ ಕ್ಷಣ –ಪ್ರಜಾವಾಣಿ ಚಿತ್ರ
ಮೈಸೂರು ನಗರದಲ್ಲಿ ಶನಿವಾರ ಸುರಿದ ಮಳೆಯಿಂದ ಜಲಾವೃತಗೊಂಡ ರಸ್ತೆಯನ್ನು ಮಹಿಳೆಯರು ದಾಟಿದ ಕ್ಷಣ –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆ ಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ.ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.