ಬೆಂಗಳೂರು: ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗದು ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಕರಾವಳಿ ಭಾಗದಲ್ಲಿ ಸ್ವಲ್ಪ ಮಳೆಯಾಗಬಹುದು. ರಾಜ್ಯದ ಇತರೆಡೆಗೆ ಯಾವುದೇ ತೊಂದರೆ ಇಲ್ಲ. ಮೋಡ ಕವಿದ ವಾತಾವರಣ ಇರಲಿದೆಯಷ್ಟೆ’ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ... ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ, ಒಡಿಶಾದತ್ತ ಚಂಡಮಾರುತ– ಎಚ್ಚರಿಕೆ
ಬಂಗಾಳ ಕೊಲ್ಲಿಯ ಈಶಾನ್ಯ ಮತ್ತು ಪೂರ್ವ ಮಧ್ಯಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.