ADVERTISEMENT

ಮೆಟ್ರೋ ರೈಲುಗಳ ಮೇಲೆ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 8:24 IST
Last Updated 4 ಆಗಸ್ಟ್ 2019, 8:24 IST
   

ಬೆಂಗಳೂರು: ನಗರದಲ್ಲಿ ಮೆಟ್ರೋ ರೈಲುಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.ಮಂತ್ರಿ ಸ್ಕ್ವೇರ್ ಸುರಂಗದಿಂದ ಹೊರ ಬರುತ್ತಿದ್ದ ರೈಲಿನಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದಾಗಿ ಗಾಜಿನ ಪರದೆ ಜಖಂಗೊಂಡಿದೆ.

ಮೆಟ್ರೋ ರೈಲು ಮಾರ್ಗದ ಮಧ್ಯೆಕಸದ ಬ್ಯಾಗ್ ಎಸೆದಿದ್ದು ಭಾನುವಾರ ಮುಂಜಾನೆ ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿರೈಲು ನಿಲ್ಲಿಸಿ ಬ್ಯಾಗ್‌ಗಳನ್ನು ತೆರವು ಮಾಡಿದ ನಂತರ ಓಡಾಟ ಆರಂಭಿಸಲಾಯಿತು

ಕಿಡಿಗೇಡಿಗಳ ಕೃತ್ಯದಿಂದ ಕಂಗೆಟ್ಟಿರುವ ಮೆಟ್ರೋ ಸಿಬ್ಬಂದಿಜೀವ ಕೈಯಲ್ಲಿ ಹಿಡಿದುಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.